alex Certify BREAKING: ಪ್ರಧಾನಿ ಮೋದಿ ಆಂಧ್ರ ಪ್ರದೇಶ ಪ್ರವಾಸದ ವೇಳೆ ಭದ್ರತಾ ಲೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರಧಾನಿ ಮೋದಿ ಆಂಧ್ರ ಪ್ರದೇಶ ಪ್ರವಾಸದ ವೇಳೆ ಭದ್ರತಾ ಲೋಪ

ಪ್ರಧಾನಿ ಮೋದಿ ಆಂಧ್ರ ಪ್ರದೇಶ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪ ಆರೋಪ ಎದುರಾಗಿದೆ. ಭೀಮಾವರಂ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿತ್ತಾದರೂ ಸಹ ಗನ್ನವರಂನಿಂದ ಭೀಮಾರಂಗೆ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಎಸಗಲಾಗಿದೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿ ಭೇಟಿಯನ್ನು ಖಂಡಿಸಿ ಆಂಧ್ರ ಪ್ರದೇಶ ಕಾಂಗ್ರೆಸ್​ ನಾಯಕರು ಮೋದಿ ಗೋ ಬ್ಯಾಕ್​ ಎಂದು ಬರೆಯಲಾದ ಕಪ್ಪು ಬಣ್ಣದ ಬಲೂನ್​ಗಳನ್ನು ಹಾರಿಸಿದ್ದಾರೆ. ಈ ಬಲೂನುಗಳು ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್​ನ ಸಮೀಪವೇ ಬಂದಿದೆ.

ಈ ಸಂಬಂಧ ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಲಿಕಾಪ್ಟರ್​ನಲ್ಲಿ ಆಂಧ್ರ ಸಿಎಂ ಜಗನ್​ ಮೋಹನ್​ ರೆಡ್ಡಿ ಹಾಗೂ ಕೇಂದ್ರ ಸಚಿವ ಕಿಶನ್​ ರೆಡ್ಡಿ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಪ್ರಧಾನಿಗಳು ಪ್ರಯಾಣಿಸುವ ಸಂದರ್ಭದಲ್ಲಿ ಈ ರೀತಿ ಘಟನೆಗಳು ಸಂಭವಿಸಿವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಪ್ರಧಾನಿ ಮೋದಿ ಭೇಟಿಯು ಪೂರ್ವ ನಿಯೋಜಿತವಾಗಿದ್ದರೂ ಸಹ ಆಂಧ್ರ ಪ್ರದೇಶದ ಅಧಿಕಾರಿಗಳು ಭದ್ರತಾ ಲೋಪ ಉಂಟಾಗಲು ಕಾರಣರಾಗಿದ್ದಾರೆ ಎಂಬ ಆಕ್ರೋಶ ಎಲ್ಲೆಡೆ ಕೇಳಿ ಬಂದಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...