alex Certify BIG NEWS: ಭಾರಿ ಮಳೆ ಹಿನ್ನೆಲೆ 4 ದಿನ ರಜೆ ಘೋಷಣೆ: ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ನಾಳೆಯೂ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರಿ ಮಳೆ ಹಿನ್ನೆಲೆ 4 ದಿನ ರಜೆ ಘೋಷಣೆ: ಮುಂಜಾಗ್ರತಾ ಕ್ರಮವಾಗಿ ಕೆಲವೆಡೆ ನಾಳೆಯೂ ರಜೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 5 ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನ ರಜೆ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಎನ್.ಆರ್. ಪುರ, ಕೊಪ್ಪ ತಾಲೂಕಿನ ಶಾಲೆಗಳಿಗೆ ಡಿಸಿ ರಮೇಶ್ ರಜೆ ಘೋಷಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಅಂಬಳೆ ಹೋಬಳಿಯಲ್ಲಿ ರಜೆ ಇರುವುದಿಲ್ಲ ಇವೆರಡು ಹೋಬಳಿ ಹೊರತುಪಡಿಸಿ ಚಿಕ್ಕಮಗಳೂರು ತಾಲೂಕಿನ ಉಳಿದೆಡೆ ರಜೆ ಇರಲಿದೆ. ನಾಳೆಯಿಂದ ಜುಲೈ 9ರವರೆಗೆ ರಜೆ ನೀಡಲಾಗಿದೆ ಎನ್ನಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಾಳೆಯೂ ಶಾಲೆ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...