alex Certify BREAKING NEWS: ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿಗೆ ಕಾಡಲಿದೆ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿಗೆ ಕಾಡಲಿದೆ ಮಳೆ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆ ಅಬ್ಬರ ಮುಂದುವರೆದಿದ್ದು, ಅದರಲ್ಲೂ ರಾಜ್ಯ ರಾಜಧಾನಿಯಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ.

ಬುಧವಾರ ಹಾಗೂ ಗುರುವಾರದಂದು ಬೆಂಗಳೂರು ನಗರ ಪ್ರದೇಶದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇದರಿಂದಾಗಿ ಬೆಂಗಳೂರಿನ ಜನತೆ ಮಳೆ ಭೀತಿಯಲ್ಲೇ ಕಾಲ ಕಳೆಯುವಂತಾಗಿದೆ.

ಹಬ್ಬದ ಕಾರಣಕ್ಕೆ ರಜೆ ಇದ್ದದ್ದರಿಂದ ಮನೆಯಲ್ಲೇ ಇದ್ದ ಜನ ಇಂದಿನಿಂದ ಕಚೇರಿ ಆರಂಭವಾಗಿರುವುದರಿಂದ ಮಳೆಯಲ್ಲಿ ಹೇಗೆ ಹೋಗುವುದು ಎಂಬ ಚಿಂತೆಯಲ್ಲಿ ಇದ್ದಾರೆ.

ಅದರಲ್ಲೂ ಮಳೆ ಬೀಳುವ ಸಂದರ್ಭದಲ್ಲಿ ಟ್ರಾಫಿಕ್ ವಿಪರೀತ ಹೆಚ್ಚಳವಾಗಲಿದ್ದು, ವಾಹನ ಸಂಚಾರವೇ ದುಸ್ತರವಾಗಲಿದೆ. ಇದು ಅನಾಹುತಗಳಿಗೂ ಒಮ್ಮೊಮ್ಮೆ ಕಾರಣವಾಗಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...