alex Certify ಕಮಿಷನ್ ಆರೋಪಕ್ಕೆ ಸುಮಲತಾ ತಿರುಗೇಟು: ಆಣೆ ಮಾಡಲು ಬಹಿರಂಗ ಸವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಮಿಷನ್ ಆರೋಪಕ್ಕೆ ಸುಮಲತಾ ತಿರುಗೇಟು: ಆಣೆ ಮಾಡಲು ಬಹಿರಂಗ ಸವಾಲ್

ಮಂಡ್ಯ: ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮೇಲುಕೋಟೆಯಲ್ಲಿ ಆಣೆ ಮಾಡಲು ಸಂಸದೆ ಸುಮಲತಾ ಅಂಬರೀಶ್ ಸವಾಲ್ ಹಾಕಿದ್ದಾರೆ.

ಜೆಡಿಎಸ್ ಶಾಸಕರು ಕಮಿಷನ್ ಪಡೆದಿರುವ ಆರೋಪ ಮಾಡಿದ್ದು, ದಾಖಲೆಗಳೊಂದಿಗೆ ಬರಲಿ, ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ಎದುರು ಆಣೆ ಪ್ರಮಾಣ ಮಾಡೋಣ. ಆಗ ಯಾರು ನಿಜ ಹೇಳುತ್ತಿದ್ದಾರೆ. ಸುಳ್ಳು ಹೇಳುತ್ತಿದ್ದಾರೆ ಎನ್ನುವುದು ಜನರಿಗೆ ಗೊತ್ತಾಗುತ್ತದೆ ಎಂದು ಸುಮಲತಾ ಅಂಬರೀಶ್ ಜೆಡಿಎಸ್ ಪಕ್ಷದ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

ನಾನು ಕಮಿಷನ್ ಪಡೆದು ಭ್ರಷ್ಟಾಚಾರವೆಸಗಿದ್ದರೆ ದಾಖಲೆಗಳೊಂದಿಗೆ ಬನ್ನಿ. ಬಹಿರಂಗ ಚರ್ಚೆಗೆ ಸಿದ್ದವಾಗಿದ್ದೇನೆ. ಅಂಬರೀಶ್ ಅವರ ಕುಟುಂಬದಲ್ಲಿ ಭ್ರಷ್ಟಾಚಾರ ಎನ್ನುವುದಿಲ್ಲ. ಆರೋಪ ಮಾಡಿದವರು ದಾಖಲೆಗಳೊಂದಿಗೆ ಚರ್ಚೆಗೆ ಬರಲಿ. ಶ್ರೀಚೆಲುವರಾಯಸ್ವಾಮಿ ಎದುರು ಆಣೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...