ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬೆಳಿಗ್ಗೆಯಿಂದಲೇ ಜನರು ಆಯುಧಗಳ ಪೂಜೆಯಲ್ಲಿ ನಿರತರಾಗಿದ್ದಾರೆ. ಮನೆಯಲ್ಲಿರುವ ಆಯುಧ, ವಾಹನಗಳನ್ನು ಶುದ್ಧಗೊಳಿಸಿ, ವಿಶೇಷ ಅಲಂಕಾರ ಮಾಡಿ, ಸಿಹಿ ತಿಂಡಿಗಳನ್ನು ತಯಾರಿಸಿ ಪೂಜೆ ನೆರವೇರಿಸುತ್ತಿದ್ದಾರೆ.
ಸಾರ್ವಜನಿಕರು ತಮ್ಮ ವಾಹನಗಳ ಪೂಜೆ ಮಾಡಿ ಮಕ್ಕಳೊಂದಿಗೆ ರೌಂಡ್ ಹಾಕುತ್ತಿರುವ ದೃಶ್ಯ ಕಂಡು ಬರುತ್ತಿದೆ. ಇನ್ನು ಗ್ಯಾರೇಜ್ ಸೇರಿದಂತೆ ಹಲವು ಸ್ಥಳಗಳಲ್ಲಿ ಮಾಲೀಕರು ತಮ್ಮ ಕೆಲಸಗಾರರೊಂದಿಗೆ ಅದ್ದೂರಿ ಪೂಜೆ ನೆರವೇರಿಸಿದ್ದಾರೆ.
ಇತ್ತ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲಾಗ್ತಾ ಇದೆ. ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಮೇಳೈಸಿದೆ. ಅರಮನೆ ಪುರೋಹಿತರ ಸಮ್ಮುಖದಲ್ಲಿ ಆಯುಧಗಳ ಪೂಜೆ ನಡೆಸಲು ಸಿದ್ದತೆ ಮಾಡಲಾಗಿದೆ.