alex Certify BIG NEWS: ‘ಸುಳ್ಳೆ ಎಲ್ಲವಯ್ಯ’ ಎನ್ನುವುದು ಸಿದ್ದರಾಮಯ್ಯ ಸಿದ್ಧಾಂತ; ಸಿ.ಟಿ.ರವಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಸುಳ್ಳೆ ಎಲ್ಲವಯ್ಯ’ ಎನ್ನುವುದು ಸಿದ್ದರಾಮಯ್ಯ ಸಿದ್ಧಾಂತ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳನ್ನು ಸಿದ್ದರಾಮಯ್ಯ ಅವರಷ್ಟು ಕರಗತ ಮಾಡಿಕೊಂಡವರು ಯಾರೂ ಇಲ್ಲ. ಸುಳ್ಳಿನ ವಿಚಾರದಲ್ಲಿ ಅವರಿಗೆ ಪೈಪೋಟಿ ನೀಡಲು ಆಗುವುದಿಲ್ಲ. ಸತ್ಯದ ತಲೆ ಮೇಲೆ ಹೊಡೆಯುವ ಹಾಗೆ ಸುಳ್ಳು ಹೇಳುತ್ತಾರೆ ಎಂದರು.

ಸಿದ್ದರಾಮಯ್ಯನವರದ್ದು ಸುಳ್ಳೇ ಎಲ್ಲವಯ್ಯ ಎಂಬ ಸಿದ್ಧಾಂತವಾಗಿದೆ. ಹಾಗಾಗಿ ರಾಜ್ಯದ ಜನತೆಗೂ ಸುಳ್ಳನ್ನೇ ಹೇಳುತ್ತಿದ್ದಾರೆ ಎಂದು ವಾಕ್ಪ್ರಹಾರ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...