alex Certify ದುಷ್ಕೃತ್ಯಕ್ಕೆ ಸಂಚು; ಮಂಗಳೂರಿನಲ್ಲಿ ಪಿ ಎಫ್ ಐ ಸಂಘಟನೆಯ ಐವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಷ್ಕೃತ್ಯಕ್ಕೆ ಸಂಚು; ಮಂಗಳೂರಿನಲ್ಲಿ ಪಿ ಎಫ್ ಐ ಸಂಘಟನೆಯ ಐವರು ಅರೆಸ್ಟ್

ಮಂಗಳೂರು: ನಿಷೇಧದ ಬಳಿಕವೂ ರಾಜ್ಯದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಪಿ ಎಫ್ ಐ ಸಂಘಟನೆಯ ಐವರನ್ನು ಬಂಧಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಸಂಘಟನೆ ನಿಷೇಧದ ಬಳಿಕವೂ ಶಾಂತಿ ಕದಡಲು ಹುನ್ನಾರ ನಡೆಸಿದ್ದ ಐವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬಂಧಿತರ ವಿಚಾರಣೆ ನಡೆದಿದೆ ಎಂದರು.

ಸಂಘಟನೆ ನಿಷೇಧ ಮಾಡಲಾಗಿದ್ದರೂ ಕೂಡ ಅವರ ಮೇಲೆ ನಿಗಾ ವಹಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಕೊಡಗು ಹಲವು ಜಿಲ್ಲೆಗಳಲ್ಲಿ ಪರಿಶಿಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಕಾನೂನು ಇತಿಮಿತಿಯಲ್ಲಿ ಪ್ರತಿಭಟನೆ ನಡೆದರೆ ಯಾವುದೇ ತಡೆಯಿಲ್ಲ. ಆದರೆ ಕಾನೂನು ನಿಯಮ ಮೀರಿ ಪ್ರತಿಭಟನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...