ತುಮಕೂರು: ಪೊಲೀಸ್ ಹುದ್ದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಗೃಹ ಸಚಿವರಿಗೆ ಮನವಿ ಮಾಡಲು ಬಂದಿದ್ದ ಪೊಲೀಸ್ ಹುದ್ದೆ ಆಕಾಂಕ್ಷಿಗಳ ಮೇಲೆ ತುಮಕೂರು ಡಿವೈ ಎಸ್ ಪಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ತುಮಕೂರಿನಲ್ಲಿ ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಉತ್ತರ ಕರ್ನಾಟಕ ಭಾಗದ ಪೊಲೀಸ್ ಹುದ್ದೆ ಆಕಾಂಕ್ಷಿಗಳು ವಯೋಮಿತಿ ಹೆಚ್ಚಿಸುವಂತೆ ಮನವಿ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸ್ ಹುದ್ದೆ ಆಕಾಂಕ್ಷಿಗಳ ಮೇಲೆ ಡಿವೈ ಎಸ್ ಪಿ ಶ್ರೀನಿವಾಸ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಡಿ ವೈ ಎಸ್ ಪಿ ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದೆ.