alex Certify ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕು ಬೆಳ್ಳಾರೆ ಗ್ರಾಮದ ಮೊಹಮ್ಮದ್ ಮುಸ್ತಫಾ, ಕೊಡಗು ಜಿಲ್ಲೆಯ ಮಡಿಕೇರಿಯ ತುಫೈಲ್ ಅವರ ಪತ್ತೆಗೆ ನೆರವಾದವರಿಗೆ 5 ಲಕ್ಷ ರೂ. ಬಹುಮಾನ ನೀಡಲಾಗುವುದು.

ಸುಳ್ಯದ ಕಲ್ಲುಮುಟ್ಲು ಮನೆ ನಿವಾಸಿ ಉಮರ್ ಫಾರೂಕ್, ಬೆಳ್ಳಾರೆ ಅಬೂಬಕರ್ ಸಿದ್ಧಿಕ್ ಪತ್ತೆಗೆ ನೆರವಾದವರಿಗೆ ತಲಾ ಎರಡು ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು. ಈ ನಾಲ್ವರು ಪಿಎಫ್ಐ ಸದಸ್ಯರಾಗಿದ್ದಾರೆ. ಇವರು ಪತ್ತೆಗೆ ನೆರವಾದವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು.

ಮಾಹಿತಿ ನೀಡುವವರು ಪೊಲೀಸ್ ವರಿಷ್ಠಾಧಿಕಾರಿ, ರಾಷ್ಟ್ರೀಯ ತನಿಕಾ ದಳ, ಎಂಟನೇ ಮಹಡಿ, ಸರ್ ಎಂ.ವಿ. ಕೇಂದ್ರೀಯ ಸದನ, ದೊಮ್ಮಲೂರು. ಬೆಂಗಳೂರು. ದೂರವಾಣಿ ಸಂಖ್ಯೆ 080 29510900, 8904241100 ಸಂಪರ್ಕಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...