alex Certify BIG NEWS: ಎನ್ ಆರ್ ಪುರ ಸಿಪಿಐ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎನ್ ಆರ್ ಪುರ ಸಿಪಿಐ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: 10,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಪಿಐ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನಲ್ಲಿ ನಡೆದಿದೆ.

ಸಿಪಿಐ ವಸಂತ್ ಶಂಕರ್ ಭಾಗವತ್ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಅಧಿಕಾರಿ. ಲಾರಿಯಲ್ಲಿ 15 ಟನ್ ಗಿಂತ ಹೆಚ್ಚು ಸಿಮೆಂಟ್ ಸಾಗಾಟ ಮಾಡಿದ್ದಕ್ಕಾಗಿ ಲಾರಿಯನ್ನು ಸಿಪಿಐ ವಶಕ್ಕೆ ಪಡೆದಿದ್ದರು.

ವಶಕ್ಕೆ ಪಡೆದ ಲಾರಿ ಬಿಡಲು ಎಸ್.ಕೆ. ಮಸ್ತಾನ್ ಎಂಬುವವರಿಂದ 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಸಿಪಿಐ ವಸಂತ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...