alex Certify ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ; ಸಾರ್ವಜನಿಕರಲ್ಲಿ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಜ್ಜೇನು ದಾಳಿಗೆ ವ್ಯಕ್ತಿ ಬಲಿ; ಸಾರ್ವಜನಿಕರಲ್ಲಿ ಆತಂಕ

ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ, ಕೆ.ಆರ್. ನಗರ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೌಕರ 58 ವರ್ಷದ ಬಸವರಾಜು ಮೃತಪಟ್ಟವರಾಗಿದ್ದು, ಇವರು ಗುರುವಾರದಂದು ಹಸುಗಳಿಗೆ ಕೃತಕ ಗರ್ಭಧಾರಣೆ ಲಸಿಕೆ ನೀಡಲು ಬೈಕಿನಲ್ಲಿ ತೆರಳುತ್ತಿದ್ದಾಗ ಹೆಜ್ಜೇನುಗಳು ದಾಳಿ ನಡೆಸಿದ್ದವು.

ಇದರಿಂದ ಕಂಗಾಲಾಗಿದ್ದ ಅವರು ಮನೆಗೆ ಮರಳಿದ್ದು, ಅಲ್ಲಿಯವರೆಗೂ ಹೆಜ್ಜೇನುಗಳು ಬೆನ್ನಟ್ಟಿ ಕಚ್ಚಿವೆ ಎನ್ನಲಾಗಿದೆ. ಮನೆಗೆ ಮರಳಿದ ಕೆಲ ಹೊತ್ತಿನಲ್ಲಿಯೇ ಅವರು ಮೃತಪಟ್ಟಿದ್ದಾರೆ.

ಬುಧವಾರದಂದು ಸಹ ಮಹಿಳೆ ಒಬ್ಬರ ಮೇಲೆ ಹೆಜ್ಜೇನುಗಳು ದಾಳಿ ಮಾಡಿದ್ದು, ಅವರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು. ಮರುದಿನವೇ ಮತ್ತೊಂದು ಘಟನೆ ನಡೆದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...