alex Certify BIG NEWS: ಕಾಡಾನೆ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು; ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಡಾನೆ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು; ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ಆಕ್ರೋಶ

ಚಿಕ್ಕಮಗಳೂರು; ಕಾಡಾನೆ ದಾಳಿ ನಿಯಂತ್ರಿಸದ ಅರಣ್ಯ ಇಲಾಖೆ ಕಚೇರಿ ಧ್ವಂಸಗೊಳಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ನಡೆದಿದೆ.

ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಇತ್ತೀಚೆಗೆ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು ಸ್ಥಳಕ್ಕೆ ಆಗಮಿಸಿದ್ದ ಶಾಸಕರ ವಿರುದ್ಧ ಸಿಡಿದೆದ್ದಿದ್ದ ಗ್ರಾಮಸ್ಥರು, ಶಾಸಕರ ಮೇಲೂ ಹಲ್ಲೆ ನಡೆಸಿದ್ದರು.

ನಿರಂತರ ಕಾಡಾನೆ ದಾಳಿಯಿಂದ ಕಂಗೆಟ್ಟ ಗ್ರಾಮಸ್ಥರು, ಈಗ ಮತ್ತೆ ಪ್ರತಿಭಟನೆ ನಡೆಸಿದ್ದು, ಕಾಡಾನೆ ನಿಯಂತ್ರಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇಲಾಖೆಯ ಕಳ್ಳ ಬೇಟೆ ನಿಗ್ರಹ ಶಿಬಿರವನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...