![](https://kannadadunia.com/wp-content/uploads/2022/08/vidha-soudha-1528423109-1628151053.jpg)
ಬೆಂಗಳೂರು: ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಹೆಚ್ಚುವರಿ ಸಿಇಒ ಹುದ್ದೆಗೆ ಐಎಎಸ್ ಅಧಿಕಾರಿ ಪಿ. ರಾಜೇಂದ್ರ ಚೋಳನ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿಯಾಗಿ ಸುಷ್ಮಾ ಗೋಡಲೆ, ಆಯುಷ್ ಇಲಾಖೆ ಆಯುಕ್ತರಾಗಿ ಜೆ. ಮಂಜುನಾಥ್, ಖಜಾನೆಗಳ ಇಲಾಖೆ ಆಯುಕ್ತರಾಗಿ ಡಾ. ಅರುಂಧತಿ ಚಂದ್ರಶೇಖರ್, ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ಡಾ.ಕೆ. ನಂದಿನಿದೇವಿ, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕರಾಗಿ ಡಾ.ವೈ. ನವೀನ್ ಭಟ್ ಅವರನ್ನು ವರ್ಗಾವಣೆ ಮಾಡಲಾಗಿದೆ.