ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ‘ಮ್ಯಾಂದೋಸ್’ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಪ್ರಭಾವದಿಂದ ರಾಜ್ಯಾದ್ಯಂತ 5 ದಿನ ಮಳೆ ಹಾಗೂ ಮೈ ಕೊರೆಯುವ ಚಳಿ ಕಾಡಲಿದೆ.
ಡಿಸೆಂಬರ್ 10 ರಿಂದ 14ರ ವರೆಗೆ ರಾಜಧಾನಿ ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೆ ವೇಳೆ ಮೈ ಕೊರೆಯುವ ಚಳಿ ಕಾಡಲಿದೆ.
ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಚಂಡಮಾರುತದ ರೌದ್ರಾವತಾರ ಮುಂದುವರೆದಿದ್ದು, ತಮಿಳುನಾಡಿನಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಶಾಲೆಗಳಿಗೆ ರಜೆ ನೀಡಲಾಗಿದೆ.