alex Certify BIG NEWS: ಆ ಹಣವನ್ನು ಸಿದ್ದರಾಮಯ್ಯನವರಿಗೆ ಕೊಡಲು ತಂದಿರಬಹುದು……ನಾನ್ಯಾಕೆ ಇದರ ಹೊಣೆ ಹೊತ್ತುಕೊಳ್ಳಲಿ ? ಸಚಿವ ಸಿ.ಸಿ. ಪಾಟೀಲ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆ ಹಣವನ್ನು ಸಿದ್ದರಾಮಯ್ಯನವರಿಗೆ ಕೊಡಲು ತಂದಿರಬಹುದು……ನಾನ್ಯಾಕೆ ಇದರ ಹೊಣೆ ಹೊತ್ತುಕೊಳ್ಳಲಿ ? ಸಚಿವ ಸಿ.ಸಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ವಿಧಾನಸೌಧದ ದ್ವಾರದ ಬಳಿ 10.5 ಲಕ್ಷ ರೂಪಾಯಿ ಹಣ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ಸಿದ್ದರಾಮಯ್ಯನವರಿಗೆ ಹಣ ಕೊಡಲು ತಂದಿರಬಹುದಲ್ಲಾ? ಎಂದು ಹೇಳಿದ್ದಾರೆ.

ಆತ ಲೋಕೋಪಯೋಗಿ ಸಚಿವರಿಗೆ ಹಣ ಕೊಡಲು ಹೋಗಿದ್ದಾ? ಸಿಎಂ ಅವರಿಗಾ? ಎಂಬ ಸಿದ್ದರಾಮಯ್ಯ ಟೀಕೆಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸಿ.ಸಿ. ಪಾಟೀಲ್, ವಿಧಾನಸೌಧದಲ್ಲಿ ವಿಪಕ್ಷ ನಾಯಕರೂ ಇರುತ್ತಾರೆ. ಆ ಹಣವನ್ನು ಸಿದ್ದರಾಮಯ್ಯನವರಿಗೆ ಕೊಡಲು ತಂದಿರಬಹುದು ಎಂದು ನಾನೂ ಹೇಳಬಹುದಲ್ಲಾ? ಎಂದು ಪ್ರಶ್ನಿಸಿದ್ದಾರೆ.

ಹಣ ಕೊಡೋದಿದ್ದರೆ ಆತ ವಿಧಾನಸೌಧಕ್ಕೆ ಬರಬೇಕಿತ್ತಾ? ಬೇರೆ ಕಡೆಯು ಕೊಡಬಹುದಿತ್ತಲ್ಲಾ…? ಎಇ ಜಗದೀಶ್ ಗೂ ನನಗೂ ಯಾವುದೇ ರೀತಿ ಸಂಬಂಧವಿಲ್ಲ. ಆರೋಪ ಮಾಡಲು ವಿಪಕ್ಷದವರಿಗೆ ಇದೊಂದು ಅವಕಾಶ. ನಾನು ಇದರ ಹೊಣೆ ಯಾಕೆ ಹೊತ್ತುಕೊಳ್ಳಲಿ ? ದುಡ್ದು ಸಿಕ್ಕಿದ್ದು ವಿಧಾನಸೌಧದ ಆವರಣದ ಹೊರಗೆ ಹಣಕ್ಕೆ ಸೂಕ್ತ ದಾಖಲಾತಿ ಕೊಡದಿದ್ದರೆ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಅವರು ಹಣ ಯಾಕೆ ತೆಗೆದುಕೊಂಡು ಬರುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಅವರನ್ನು ಬಂಧಿಸುವಂತೆ ಸೂಚಿಸಿದ್ದರು. ಅದರಂತೆ ಹಣ ತಂದಿದ್ದ ಜಗದೀಶ್ ರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತನಿಖಾ ವರದಿ ಬಂದ ಬಳಿಕ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...