alex Certify BIG NEWS: ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್; ಭೀಕರ ಅಪಘಾತಕ್ಕೆ ಯುವಕ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್; ಭೀಕರ ಅಪಘಾತಕ್ಕೆ ಯುವಕ ಬಲಿ

ಬೆಂಗಳೂರು: ಕ್ಯಾಂಟರ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಕ್ಯಾಂಟರ್ ಹರಿದು ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ.

19 ವರ್ಷದ ಸೋಹಿಲ್ ಬಿಸ್ವಾಸ್ ಮೃತ ಯುವಕ. ಕನಕಪುರ ರಸ್ತೆಯ ಯೂನಿಟೆಕ್ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಪಶ್ಚಿಮ ಬಂಗಾಳ ಮೂಲದ ಸೋಹಿಲ್ ಕಾಂಕ್ರೀಟ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ. ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡಿದ್ದ ಸೋಹಿಲ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಗಿ ತಿಳಿದುಬಂದಿದೆ. ಹರ್ಯಾಣ ಮೂಲದ ಕ್ಯಾಂಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...