ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: 3 -4 ಶಾಸಕರ ರಾಜೀನಾಮೆ; ಎಸ್.ಆರ್. ಶ್ರೀನಿವಾಸ್ ಬಾಂಬ್

ತುಮಕೂರು: ಜೆಡಿಎಸ್ ಪಕ್ಷದ 3 -4 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಈ ಬಗ್ಗೆ ಆಂತರಿಕ ಚರ್ಚೆ ನಡೆಯುತ್ತಿದೆ ಎಂದು ಗುಬ್ಬಿ ಶಾಸಕ, ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಹೊರ ಹಾಕಿದಾಗ ರಾಜೀನಾಮೆ ನೀಡಲೇಬೇಕು. ಬಜೆಟ್ ಅಧಿವೇಶನ ಮುಗಿದ ನಂತರ ನಾನು ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಟಿಕೆಟ್ ಬಯಸಿ ನಾನು ಕೆಪಿಸಿಸಿಗೆ ಅರ್ಜಿ ಸಲ್ಲಿಸಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತೇನೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಯಾವುದೇ ಪಕ್ಷ ಸರಿಯಾದ ಮಾನ್ಯತೆ ನೀಡಿ ಕರೆದುಕೊಂಡರೆ ಸೇರುತ್ತೇನೆ. ಇಲ್ಲದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read