
ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಐತಿಹಾಸಿಕ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ,
ಕೇರಳದ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ಗೋಚರಿಸಿದೆ. ಬೆಟ್ಟದಲ್ಲಿ ಜ್ಯೋತಿಯ ರೂಪದಲ್ಲಿ ಮಣಿಕಂಠ ಗೋಚರಿಸಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡು ಭಾವಪರವಶರಾಗಿದ್ದಾರೆ. ಐತಿಹಾಸಿಕ ಶಬರಿಮಲೆಯಲ್ಲಿ ಸೇರಿದ್ದ ಲಕ್ಷಾಂತರ ಭಕ್ತರು ಸ್ವಾಮಿಯ ದರ್ಶನ ಪಡೆದು ಮಕರ ಜ್ಯೋತಿ ಕಣ್ತುಂಬಿಕೊಂಡಿದ್ದಾರೆ.
ಪಂದಳದಿಂದ ಅಯ್ಯಪ್ಪಸ್ವಾಮಿ ಸನ್ನಿಧಿಗೆ ಆಭರಣ ತಂದು ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಗಿದೆ. ಗರುಡ ದರ್ಶನವಾಗಿದ್ದು, ಇದರ ಜೊತೆಗೆ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನವಾಗಿದೆ.