ಬಿಪಿಎಲ್ ಕುಟುಂಬಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಚಿಕ್ಕಮಗಳೂರು: ಬಿಪಿಎಲ್ ಕುಟುಂಬಗಳಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ತಿಂಗಳು ಹಣಕಾಸಿನ ನೆರವು ನೀಡಲು ‘ಗೃಹಿಣಿ ಶಕ್ತಿ’ ಹೆಸರಲ್ಲಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಉತ್ಸವ ಉದ್ಘಾಟನೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಬೀರೂರು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ ಬಡ ಕುಟುಂಬಗಳ ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಮತ್ತು ಆರೋಗ್ಯ ಸುಧಾರಣೆ ಸೇರಿದಂತೆ ಅವರ ಉತ್ತಮ ಬದುಕಿಗೆ ಸರ್ಕಾರ ಹಲವು ಯೋಜನೆ ಮೂಲಕ ಸೌಲಭ್ಯ ಕಲ್ಪಿಸುತ್ತಿದ್ದು, ಬಿಪಿಎಲ್ ಕುಟುಂಬಗಳಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ತಿಂಗಳು ಹಣಕಾಸು ನೆರವು ನೀಡಲು ಗೃಹಿಣಿ ಶಕ್ತಿ ಹೆಸರಲ್ಲಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ. ಕಂದಾಯ ಸಚಿವರು ಬಿಪಿಎಲ್ ಕುಟುಂಬಗಳಿಗೆ ಮತ್ತಷ್ಟು ಸೌಲಭ್ಯ ದೊರಕಿಸಿಕೊಡಲು ಪ್ರಸ್ತಾಪಿಸಿದ್ದು, ಸಾಧಕ ಬಾಧಕಗಳ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read