BIG NEWS: ನಂದಿ ಬೆಟ್ಟದಲ್ಲಿ ಟ್ರಕಿಂಗ್ ಗೆ ಹೋಗಿ ಪ್ರಪಾತಕ್ಕೆ ಬಿದ್ದ ಇಬ್ಬರು ಯುವಕರು

ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆಯಲ್ಲಿ ಟ್ರಕಿಂಗ್ ಗೆ ನಂದಿಬೆಟ್ಟಕ್ಕೆ ಹೋಗಿದ್ದ ಯುವಕರು ಪ್ರಪಾತಕ್ಕೆ ಬಿದ್ದು ರಕ್ಷಣೆಗಾಗಿ ಮೊರೆಯಿಟ್ಟ ಘಟನೆ ನಡೆದಿದೆ.

ದೊಡ್ದಬಳ್ಳಾಪುರ ಮೂಲದ ಮನೋಜ್ ಕುಮಾರ್ ಹಾಗೂ ಮಂಜುನಾಥ್ ಎಂಬ ಇಬ್ಬರು ಯುವಕರು ನಂದಿಗಿರಿಧಾಮಕ್ಕೆ ತೆರಳಿ ಟ್ರಕಿಂಗ್ ಗೆ ಹೋಗಿದ್ದಾರೆ. ಈ ವೇಳೆ ಪ್ರಪಾತಕ್ಕೆ ಬಿದ್ದಿದ್ದು, ವೀರಭದ್ರೇಶ್ವರ ದೇವಸ್ಥಾನದ ಇಳಿಜಾರಿನಲ್ಲಿ ಸಿಲುಕಿಕೊಂಡಿದ್ದಾರೆ.

ತಕ್ಷಣ ರಕ್ಷಣೆಗಾಗಿ 112ಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಯುವಕರನ್ನು ರಕ್ಷಿಸಿದ್ದಾರೆ. ಮನೋಜ್ ಎಂಬ ಯುವಕನಿಗೆ ಗಾಯಗಳಾಗಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read