BIG NEWS: ಪೇಶ್ವೆ ವಂಶಸ್ಥರು ಯಡಿಯೂರಪ್ಪ ಸರ್ಕಾರವನ್ನು ತೆಗೆದರು; ಪರೋಕ್ಷವಾಗಿ ಜೋಶಿ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ

ಕಾರವಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಸರ್ಕಾರವನ್ನು ತೆಗೆಯಲು ಪೇಶ್ವೆ ವಂಶದವರೇ ಕಾರಣ ಎಂದು ಹೇಳಿದ್ದಾರೆ.

ಕಾರವಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪೇಶ್ವೆ ವಂಶದವರು ಯಡಿಯೂರಪ್ಪನವರಿಗೆ ಅಧಿಕಾರ ಮಾಡಲು ಬಿಡಲಿಲ್ಲ, ಪೇಶ್ವೆ ವಂಶದವರೇ ಯಡಿಯೂರಪ್ಪನವರ ಸರ್ಕಾರವನ್ನು ತೆಗೆದರು. ಎರಡನೇ ಬಾರಿಗೆ ಯಡಿಯೂರಪ್ಪ ಕಷ್ಟ ಪಟ್ಟು ಸಿಎಂ ಆದರು. ಆದ್ರೆ ಅವರನ್ನು ಹೇಗೆ ನಡೆಸಿಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.

ಇನ್ನು ಕುಟುಂಬ ರಾಜಕಾರಣದ ಬಗ್ಗೆ ನಮ್ಮ ಪಕ್ಷವನ್ನು ಟೀಕಿಸುತ್ತಿದ್ದಾರೆ. ವಂಶಾಡಳಿತ ಬಿಜೆಪಿಯಲ್ಲಿ, ಕಾಂಗ್ರೆಸ್ ನಲ್ಲಿ ಇಲ್ಲವೇ ? ಅನಗತ್ಯವಾಗಿ ನನ್ನ ಕುಟುಂಬದ ಮೇಲೆ ಟಾರ್ಗೆಟ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read