BREAKING: ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ: ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಶಿಫಾರಸು ಜಾರಿ ಬಗ್ಗೆ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ವೇತನ ಆಯೋಗದ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ನೌಕರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದ್ದೇನೆ. ಮಾರ್ಚ್ ಒಳಗೆ ಮಧ್ಯಂತರ ವರದಿ ಕೊಡಲು ಸೂಚಿಸುತ್ತೇನೆ. ಮಧ್ಯಂತರ ವರದಿ ಬಂದ ಬಳಿಕ ಮಾರ್ಚ್ ಒಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಧ್ಯಂತರ ವರದಿಯ ಶಿಫಾರಸು ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7ನೇ ವೇತನ ಆಯೋಗ ಈಗಾಗಲೇ ರಚನೆ ಮಾಡಲಾಗಿದೆ. ವೇತನ ಆಯೋಗದಿಂದ ಮಾರ್ಚ್ ಒಳಗೆ ಮಧ್ಯಂತರ ವರದಿ ಪಡೆದು ವರದಿಯ ಶಿಫಾರಸು ಜಾರಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read