ಚುನಾವಣೆ ಸಮೀಪಿಸುತ್ತಿದ್ದಂತೆ ಜೋರಾಗಿದೆ ಕುರುಡು ಕಾಂಚಾಣದ ಸದ್ದು

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಕಂತೆ ಕಂತೆ ಅಕ್ರಮ ಹಣವನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಹುಬ್ಬಳ್ಳಿ-ಕಾರವಾರ ಚೆಕ್ ಪೋಸ್ಟ್ ನಲ್ಲಿ ಕಾರು ತಪಾಸಣೆ ನಡೆಸಿದಾಗ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 15 ಲಕ್ಷ ರೂಪಾಯಿ ಅಕ್ರಮ ಹಣವನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕಾರನ್ನು ಚೆಕ್ ಪೋಸ್ಟ್ ನಲ್ಲಿ ತಡೆದು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ. ಹಣ ಹಾಗೂ ಕಾರು ಚಾಲಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read