ಚುನಾವಣೆ ಹೊತ್ತಲ್ಲೇ ಜಮೀರ್ ಅಹ್ಮದ್ ಗೆ ಸಂಕಷ್ಟ: ಆದಾಯ ಮೀರಿ ಆಸ್ತಿ ಗಳಿಕೆ FIR ಗೆ ತಡೆಯಾಜ್ಞೆ ನಿರಾಕರಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹದಳ ದಾಖಲಿಸಿದ ಎಫ್ಐಆರ್ ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಎಸಿಬಿ ದಾಖಲಿಸಿದ ಎಫ್ಐಆರ್‌ ಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ವಜಾಗೊಳಿಸಿ ಆದೇಶ ನೀಡಿದೆ. ವಿಧಾನಸಭೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಲೋಕಾಯುಕ್ತ ತನಿಖೆಯನ್ನು ಜಮೀರ್ ಅಹ್ಮದ್ ಖಾನ್ ಎದುರಿಸಬೇಕಿದೆ. ಆದಾಯ ಮೀರಿ 87 ಕೋಟಿ ರೂ. ಹೆಚ್ಚುವರಿ ಆಸ್ತಿ ಗಳಿಸಿದ ಆರೋಪದ ಮೇಲೆ 2022ರ ಮೇನಲ್ಲಿ ಎಸಿಬಿ ದಾಳಿ ನಡೆಸಿ ಕೇಸ್ ದಾಖಲಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read