ಕಾಂಗ್ರೆಸ್ ನಲ್ಲಿ ಚುನಾವಣೆಗೆ ಮೊದಲೇ ಸಿಎಂ ಘೋಷಣೆ ಇಲ್ಲ: ಖರ್ಗೆ ಸಿಎಂ ಆಗಲು ಬೆಂಬಲ ಡಿಕೆಶಿ ಹೇಳಿಕೆಗೆ ಶಶಿ ತರೂರ್ ಪ್ರತಿಕ್ರಿಯೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಯಸಿದರೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಪ್ರತಿಕ್ರಿಯೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಚುನಾವಣೆಗೂ ಮೊದಲು ಮುಖ್ಯಮಂತ್ರಿ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಂಪೂರ್ಣ ಬೆಂಬಲವಿದೆ. ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಪ್ರಕ್ರಿಯೆ ಇದೆ. ರಾಜ್ಯದಲ್ಲಿ ಚುನಾವಣೆ ಗೆಲ್ಲುವುದು ನಮ್ಮ ಮೊದಲ ಗುರಿಯಾಗಿದೆ. ನಂತರ ಶಾಸಕರ ಅಭಿಪ್ರಾಯ ಪರಿಗಣಿಸಿ ಮುಖ್ಯಮಂತ್ರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುತ್ತೇವೆ ಎನ್ನುವ ಡಿ.ಕೆ. ಶಿವಕುಮಾರ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read