BIG NEWS: ಅಗ್ನಿಪಥ್ ಯೋಜನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಶಸ್ತ್ರ ಪಡೆಗಳಿಗೆ ಅಲ್ಪಾವಧಿ ನೇಮಕಾತಿಗಾಗಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಫೆಬ್ರವರಿ 27 ರ ತೀರ್ಪಿನ ವಿರುದ್ಧದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರ ಪೀಠವು, ನೇಮಕಾತಿಗೆ ಸ್ಥಾಪಿತ ಹಕ್ಕನ್ನು ಹೊಂದಿರಬಾರದು. ಯೋಜನೆಯು ಅನಿಯಂತ್ರಿತವಲ್ಲ ಎಂದು ಹೇಳಿದೆ.

ನಾಲ್ಕು ವರ್ಷಗಳ ಅವಧಿಗೆ ಎಲ್ಲಾ ಮೂರು ಸಶಸ್ತ್ರ ಪಡೆಗಳ ವಿಭಾಗಗಳಿಗೆ ಯುವಕರನ್ನು ಸೇರ್ಪಡೆ ಮಾಡಲು ಅಗ್ನಿಪಥ್ ಯೋಜನೆಯನ್ನು ಕಳೆದ ವರ್ಷ ಪರಿಚಯಿಸಲಾಯಿತು. ಖುದ್ದು ಹಾಜರಾದ ವಕೀಲ ಎಂ.ಎಲ್. ಶರ್ಮಾ, ಸಂಸತ್ತು ಅಂಗೀಕರಿಸದ ಹೊರತು ಯೋಜನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯು ರಾಷ್ಟ್ರೀಯ ಹಿತಾಸಕ್ತಿಯಲ್ಲಿದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಕೇಂದ್ರವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ, ಹೈಕೋರ್ಟ್‌ನ ತೀರ್ಪು ಈ ಸಮಸ್ಯೆಗಳನ್ನು ವಿವರವಾಗಿ ಪರಿಗಣಿಸಿದೆ ಎಂದು ಸಲ್ಲಿಸಿದರು. ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದ ಪೀಠ, ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಅಭ್ಯರ್ಥಿಗಳಿಗೆ ಯಾವುದೇ ಪಟ್ಟಭದ್ರ ಹಕ್ಕನ್ನು ಹೊಂದಿಲ್ಲ ಎಂದು ಹೇಳಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read