ಚುನಾವಣೆ ಪ್ರಚಾರದ ವೇಳೆ ಆಘಾತಕಾರಿ ಘಟನೆ: ಶಾಸಕನ ಮೇಲೆ ಹಲ್ಲೆಗೆ ಯತ್ನ, ವಾಹನಕ್ಕೆ ಕಲ್ಲು

ಕಲಬುರಗಿ: ಚಿಂಚೋಳಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರ ಮೀಸಲು ಪಡೆ ಹಾಗೂ ಸ್ಥಳೀಯ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಅವಿನಾಶ್ ಜಾಧವ್ ನಿನ್ನೆ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾಗ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ್ದಾರೆ. ತಡ ರಾತ್ರಿಯೇ 7 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read