alex Certify ಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್, ಸಂಸದೆ ಸುಮಲತಾ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿ ಪರ ನಟ ದರ್ಶನ್, ಸಂಸದೆ ಸುಮಲತಾ ಪ್ರಚಾರ

ಮಂಡ್ಯ: ನಟ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಈಗ ನಟ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.

ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರವಾಗಿ ಸಂಸದೆ ಸಮ್ಮಲತಾ ಅಂಬರೀಶ್ ಮತ್ತು ನಟ ದರ್ಶನ್ ಪ್ರಚಾರ ನಡೆಸಿದ್ದಾರೆ. ಶ್ರೀರಂಗಪಟ್ಟಣದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ತೆರೆದ ವಾಹನದಲ್ಲಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ ಅವರು ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಅವರಿಗೆ ಸಾಥ್ ನೀಡಿದ್ದಾರೆ.

ಮೆರವಣಿಗೆ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿದಾಗ ದರ್ಶನ್ ವಾಹನದಿಂದ ಕೆಳಗಿಳಿದು ತೆರಳಿದ್ದಾರೆ. ಅವರು ಚುನಾವಣಾಧಿಕಾರಿ ಕಚೇರಿಗೆ ತೆರಳಲಿಲ್ಲ. ಸಂಸದೆ ಸುಮಲತಾ ಅಂಬರೀಶ್ ಚುನಾವಣಾ ಅಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದರು. ಈ ಬಾರಿ ಆಶ್ಚರ್ಯಕರ ಫಲಿತಾಂಶ ಹೊರಬೀಳಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...