ಚಿಕ್ಕಮಗಳೂರು: ಕಿರುಕುಳಕ್ಕೆ ಬೇಸತ್ತು ಬಿಜೆಪಿ ಕಾರ್ಯಕರ್ತನೊಬ್ಬ ಟವರ್ ಏರಿ ಕುಳಿತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶಿವನಿ ಗ್ರಾಮದಲ್ಲಿ ನಡೆದಿದೆ.
ಶಿವನಿ ಗ್ರಾಮದ ರಂಗಪ್ಪ ಬೋವಿ ಟವರ್ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಟವರ್ ಮೇಲಿಂದಲೇ ವಿಡಿಯೋ ಮಾಡಿ ಕಳುಹಿಸಿದ್ದಾನೆ.
ಗ್ರಾಮಸ್ಥರು, ಪೊಲೀಸರು ಆತನನ್ನು ಸಮಾಧಾನಪಡಿಸಿ, ಕೆಳಗಿಳಿಯುವಂತೆ ಮನವಿ ಮಾಡಿದರೂ ಕೇಳುತ್ತಿಲ್ಲ. ಚುನಾವಣೆಯಲ್ಲಿ ಸೋತ ಮೇಲೆ ಬೆಂಬಲ ಕೊಡುತ್ತಿಲ್ಲ ಕಿರುಕುಳ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾನೆ.