ಶೆಟ್ಟರ್ ಪಕ್ಷ ಬಿಟ್ಟ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಯಡಿಯೂರಪ್ಪ: ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ಉದ್ಯಮ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಲಿಂಗಾಯಿತ ಸಮಾಜದ ಪ್ರಮುಖರು, ಧಾರವಾಡ ಜಿಲ್ಲೆಯ ಲಿಂಗಾಯಿತ ಸಮಾಜದ ಮುಖಂಡರೊಂದಿಗೆ ಹೋಟೆಲ್ ನಲ್ಲಿ ಯಡಿಯೂರಪ್ಪ ಸಭೆ ನಡೆಸಿ ಬಿಜೆಪಿ ಬೆಂಬಲಿಸುವ ಕುರಿತಾಗಿ ಚರ್ಚಿಸಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಎದುರು ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಗೂ ಮೊದಲು ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ. ಇಂದು ಮತ್ತು ನಾಳೆ ಇಲ್ಲಿನ ಮುಖಂಡರೊಂದಿಗೆ ಚರ್ಚೆ ನಡೆಸಲಾಗುವುದು. ಬಿಜೆಪಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯರ್ಥವಾಗುತ್ತಿದೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read