alex Certify ಶೆಟ್ಟರ್ ಸೋಲಿಸಿ ಎಂದು ಕರೆ ನೀಡಿದ ಬಿ.ಎಸ್.ವೈ.ಗೆ ಖರ್ಗೆ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೆಟ್ಟರ್ ಸೋಲಿಸಿ ಎಂದು ಕರೆ ನೀಡಿದ ಬಿ.ಎಸ್.ವೈ.ಗೆ ಖರ್ಗೆ ತಿರುಗೇಟು

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕರೆ ನೀಡಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದು, ಸೋಲಲೆಂದು ಶೆಟ್ಟರ್ ಅವರನ್ನು ಅಭ್ಯರ್ಥಿಯಾಗಿಸಿಲ್ಲ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರನ್ನು ಸೋಲಿಸಿದರೆ ಇನ್ನೊಬ್ಬರಿಗೆ ಪಾಠ ಕಲಿಸಿದಂತಾಗುತ್ತದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಬಿಜೆಪಿಯವರು ಹಣ ಬಲ, ತೋಳ್ಬಲ ಬಳಸುತ್ತಿದ್ದಾರೆ. ನಾವು ಸೋಲಲೆಂದು ಜಗದೀಶ್ ಶೆಟ್ಟರ್ ಅವರನ್ನು ಅಭ್ಯರ್ಥಿಯಾಗಿಸಿಲ್ಲ. ನಾವೂ ಅಷ್ಟೇ ಧೈರ್ಯದಿಂದ ಚುನಾವಣೆ ಎದುರಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...