alex Certify ಹಣದ ಹೊಳೆಹರಿಸಿ ಬಿಜೆಪಿ ಚುನಾವಣೆ ಗೆಲ್ಲಲು ಹೊರಟಿದೆ; ಮಾಜಿ ಸಿಎಂ HDK ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣದ ಹೊಳೆಹರಿಸಿ ಬಿಜೆಪಿ ಚುನಾವಣೆ ಗೆಲ್ಲಲು ಹೊರಟಿದೆ; ಮಾಜಿ ಸಿಎಂ HDK ವಾಗ್ದಾಳಿ

ವಿಧಾನಸಭಾ ಚುನಾವಣೆಗೆ ದಿನಾಂಕ ಸಮೀಪಿಸುತ್ತಿರುವಂತೆಯೇ ಪ್ರಚಾರದ ಅಬ್ಬರ ಜೋರಾಗಿದ್ದು, ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸುತ್ತಿರುವ ನಾಯಕರು ಪರಸ್ಪರ ಆರೋಪ – ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದಾರೆ. ಮಾತಿನ ಸಮರ ಮುಂದುವರೆದಿರುವ ಮಧ್ಯೆ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಣದ ಹೊಳೆಹರಿಸಿ ಬಿಜೆಪಿ, ಚುನಾವಣೆಯನ್ನು ಗೆಲ್ಲಲು ಹೊರಟಿದೆ. ಆದರೆ ಈ ಚುನಾವಣೆಯೇ ಬೇರೆ. ಉಪ ಚುನಾವಣೆಯೇ ಬೇರೆ. ಜೆಡಿಎಸ್ ಗೆ ಮತ ನೀಡಲು ಜನತೆ ಹೇಗಾಗಲೇ ನಿರ್ಧರಿಸಿದ್ದಾರೆ ಎಂದರು.

ಮುಖ್ಯಮಂತ್ರಿ ಮುಖ್ಯಮಂತ್ರಿ ಆಗಿದ್ದಾಗ ಏನೂ ಕೆಲಸ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ರೈತರ 25,000 ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದು ಯಾರು ಎಂದು ಪ್ರಶ್ನಿಸಿದ ಅವರು, ಜೆಡಿಎಸ್ ಕುರಿತು ಮಾತನಾಡಲು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಬಳಿ ಯಾವುದೇ ವಿಷಯಗಳಿಲ್ಲ. ಹೀಗಾಗಿ ಈ ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಬಿ ಟೀಮ್ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...