ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಹೋದರರಿಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನಲ್ಲಿ ನಡೆದಿದೆ.
ಸಾಗರದ ರಾಮನಗರ ನಿವಾಸಿಗಳಾದ ಸುಹೇಲ್ ಹಾಗೂ ಸೈಯದ್ ಅಫ್ರೀದ್ ಮೃತಪಟ್ಟವರಾಗಿದ್ದು, ಇವರುಗಳು ಉಳವಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರು ಹಾಗೂ ಬೈಕು ನಜ್ಜುಗುಜ್ಜಾಗಿದ್ದು, ಮೃತಪಟ್ಟವರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.