alex Certify ಮಂಗಳೂರಿನಲ್ಲಿ ತುಳುವಿನಲ್ಲೇ ಭಾಷಣ ಆರಂಭಿಸಿ ಗಮನ ಸೆಳೆದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರಿನಲ್ಲಿ ತುಳುವಿನಲ್ಲೇ ಭಾಷಣ ಆರಂಭಿಸಿ ಗಮನ ಸೆಳೆದ ಪ್ರಧಾನಿ ಮೋದಿ

ಮಂಗಳೂರು: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಿದ್ದು, ಚುನಾವಣಾ (Election Campaign) ರಣ ಕಹಳೆ ಮೊಳಗಿಸಿದ್ದಾರೆ.

ಮೂಲ್ಕಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಮೊದಲಿಗೆ ‘ಭಾರತ್ ಮಾತಾಕಿ ಜೈ’ ಎಂದು ಹೇಳಿ ಭಾಷಣ ಆರಂಭಿಸಿದ್ದಾರೆ.

ನಂತರ ತುಳುವಿನಲ್ಲಿ ಪರಶುರಾಮ ಕ್ಷೇತ್ರದ ಎನ್ನ ಮೋಕೆದ ತುಳುವಪ್ಪೆ ಜೋಕುಲೇಗ್ ಸೊಲ್ಮೆಲು (ಪರಶುರಾಮ ಕ್ಷೇತ್ರದ ತಾಯಿಯ ಪ್ರೀತಿಯ ಮಕ್ಕಳಿಗೆ ನಮಸ್ಕಾರಗಳು) ಎಂದು ಹೇಳಿ ಭಾಷಣ ಆರಂಭಿಸಿದ್ದು ವಿಶೇಷವಾಗಿತ್ತು.

ನಂತರ ಸಮಾವೇಶದಲ್ಲಿ ಜನರ ಜೊತೆ ಫ್ಲಾಶ್‌ ಲೈಟ್ ಮಾಡಲು ಹೇಳಿದ ಮೋದಿ ಪ್ರತಿ ಮನೆಗೆ ಹೋಗಿ ಬಿಜೆಪಿ‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬೇಕು, ಈ ಬಾರಿ ಬಿಜೆಪಿ ಗೆಲ್ಲಿಸಿ ಎಂದು ಮನವಿ ಮಾಡಿದರು. ಕೊನೆಗೆ ಜೈ ಬಜರಂಗ ಬಲಿ ಘೋಷಣೆ ಕೂಗಿ ಭಾಷಣ ಮುಗಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...