alex Certify ಮೀನುಗಾರರ ಶ್ರೇಯೋಭಿವೃದ್ದಿಯೇ ನಮ್ಮ ಗುರಿ: ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರರ ಶ್ರೇಯೋಭಿವೃದ್ದಿಯೇ ನಮ್ಮ ಗುರಿ: ಪ್ರಧಾನಿ ಮೋದಿ

ಕಾರವಾರ : ಮೀನುಗಾರರ ಶ್ರೇಯೋಭಿವೃದ್ದಿ ನಮ್ಮ ಗುರಿಯಾಗಿದೆ. ಮೀನುಗಾರರ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ( BJP) ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದು, ಸಮಾವೇಶದಲ್ಲಿ ಮಾತನಾಡಿದ ಅವರು, ನಮಗೆ ರಿಮೋಟ್ ಕಂಟ್ರೋಲ್ ಇಲ್ಲ. ನನಗೆ ನೀವೆ ರಿಮೋರ್ಟ್ ಕಂಟ್ರೋಲ್ ಎಂದು ಹೇಳಿದ್ದಾರೆ.

ನನಗೆ 140 ಕೋಟಿ ಜನರೇ ರಿಮೋಟ್ ಕಂಟ್ರೋಲರ್ ( Remote Controller) ಆಗಿದ್ದು, ನನಗೆ ಬೇರೆ ಯಾರು ಕೂಡ ಕಂಟ್ರೋಲರ್ ಇಲ್ಲ ಅಂತ ಹೇಳಿದ್ದಾರೆ.

ಕರ್ನಾಟಕವನ್ನು ಸಮಗ್ರ ಅಭಿವೃದ್ದಿಗೊಳಿಸುವುದೇ ನನ್ನ ಗುರಿ, ರಾಜ್ಯದ ಅಭಿವೃದ್ದಿಗಾಗಿ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಜಾರಿಗೆ ತಂದಿದೆ ಎಂದರು.

ಮೀನುಗಾರರ ಶ್ರೇಯೋಭಿವೃದ್ದಿ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ನ ಸುಳ್ಳು ಗ್ಯಾರೆಂಟಿಗಳಿಗೆ ಮರುಳಾಗಬೇಡಿ ಎಂದು ಪ್ರಧಾನಿ ಮೋದಿ ಹೇಳಿದರು. ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಅಭ್ಯರ್ಥಿಗಳಾದ ವಿಶ್ವೇಶ್ವರ್ ಹೆಗಡೆ ಕಾಗೇರಿ, ರೂಪಾಲಿ ನಾಯ್ಕ ಮತ್ತಿತರರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...