BREAKING NEWS: ವರುಣಾ ಜೊತೆ ಚಾಮರಾಜ ನಗರದಲ್ಲೂ ಸಚಿವ ಸೋಮಣ್ಣಗೆ ಹಿನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ವಿಧಾನಸಭಾ ಕ್ಷೇತ್ರದ ಜೊತೆಗೆ ಚಾಮರಾಜನಗರದಲ್ಲೂ ಕಣಕ್ಕಿಳಿದಿದ್ದ ಸಚಿವ ಸೋಮಣ್ಣ ಆರಂಭಿಕ ಹಿನ್ನಡೆ ಸಾಧಿಸಿದ್ದಾರೆ.

ಪ್ರತಿ ಬಾರಿಯೂ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದ ವಿ. ಸೋಮಣ್ಣ ತಮಗೆ ಎರಡು ಕ್ಷೇತ್ರಗಳಿಂದ ಬಿಜೆಪಿ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಅಚ್ಚರಿಗೊಂಡಿದ್ದರು.

ಒಲ್ಲದ ಮನಸ್ಸಿನಿಂದಲೇ ಈ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ. ಸೋಮಣ್ಣ ಈಗ ಆರಂಭಿಕ ಹಿನ್ನಡೆ ಸಾಧಿಸಿದ್ದಾರೆ. ಆದರೆ ಇನ್ನೂ ಹಲವು ಸುತ್ತುಗಳ ಮತ ಎಣಿಕೆ ಕಾರ್ಯ ಇದ್ದು ಯಾರಿಗೆ ಗೆಲುವು ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read