alex Certify ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಹತ್ಯೆ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡು ಮೂಲದ ಗಂಗಾ ಮೃತಪಟ್ಟ ಮಹಿಳೆ. ಅಲೆಮಾರಿ ಸಮುದಾಯಕ್ಕೆ ಸೇರಿದ ಗಂಗಾ ಕುಟುಂಬದವರು ಮೂರ್ನಾಲ್ಕು ತಿಂಗಳಿಗೊಮ್ಮೆ ಒಂದೊಂದು ಪ್ರದೇಶಕ್ಕೆ ಗುಳೆ ಹೋಗುತ್ತಿದ್ದರು. ಮೂರು ತಿಂಗಳ ಹಿಂದೆ ಗಂಜಾಂಗೆ ಬಂದು ನೆಲೆಸಿದ್ದರು. ಇವರು ಕಾವೇರಿ ನದಿಯಲ್ಲಿ ನಾಣ್ಯ ಹುಡುಕುವ ಕೆಲಸ ಮಾಡುತ್ತಿದ್ದರು.

ಗಂಗಾ ಮದ್ಯಪಾನ ಮಾಡಿ ತಿರುಗಾಡುತ್ತಿದ್ದು, ಭಾನುವಾರ ರಾತ್ರಿ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಮದ್ಯಪಾನ ಮಾಡಿಸಿ ಬಳಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಶ್ರೀರಂಗಪಟ್ಟಣ ಟೌನ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...