ಬೆಂಗಳೂರು: ಹಾದಿ ಬೀದಿಯಲ್ಲಿ ಹೋಗೋರಿಗೆಲ್ಲ ಗ್ಯಾರಂಟಿ ಸ್ಕೀಂ ಕೊಡಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಗ್ಯಾರಂಟಿ ಜಾರಿಯ ಭರವಸೆಗಳನ್ನು ಕೊಟ್ಟಿದ್ದರು. ಮೊದಲ ಸಂಪುಟದಲ್ಲಿಯೇ ಗ್ಯಾರಂಟಿ ಜಾರಿ ಬಗ್ಗೆ ಆಶ್ವಾಸನೆ ನೀಡಿದ್ದರು. ಮತದಾರರ ಕಾಲಿಗೆ ಬಿದ್ದು ಮತಪಡೆದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಿಎಂ,
ಡಿಸಿಎಂ ಆಗಿದ್ದಾರೆ. ಈಗ ಹಾದಿ ಬೀದಿಯಲ್ಲಿ ಹೋಗೋರು ಅಂತಿರೋದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.