ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಿಲ್ಲ; ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಿದ ರಾಹುಲ್ ಗಾಂಧಿ ವಾಗ್ದಾಳಿ

19 ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರಿಂದ ಜರುಗುವ ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವ ಹೊತ್ತಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದರ ಬಗ್ಗೆ ಅಪಸ್ವರವೆತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಲಾಗಿಲ್ಲ. ಬದಲಾಗಿ ಸಾಂವಿಧಾನಿಕ ಮೌಲ್ಯಗಳ ಮೂಲಕ ನಿರ್ಮಿಸಲಾಗಿದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ರಾಷ್ಟ್ರಪತಿಯವರು ಸಂಸತ್ತಿನ ಉದ್ಘಾಟನೆಗೆ ಬರುವುದು ಅಥವಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ. ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಮಾಡಲ್ಪಟ್ಟಿಲ್ಲ, ಆದರೆ ಸಾಂವಿಧಾನಿಕ ಮೌಲ್ಯಗಳಿಂದ ಕೂಡಿದೆ” ಎಂದಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳು, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು, ಪ್ರಜಾಪ್ರಭುತ್ವದ ಆತ್ಮವು ಸಂಸತ್ತಿನಿಂದ ಹೊರಬಂದಾಗ ಹೊಸ ಕಟ್ಟಡದಲ್ಲಿ ಯಾವುದೇ ಮೌಲ್ಯವನ್ನು ಕಾಣುವುದಿಲ್ಲ ಎಂದು ಪ್ರತಿಪಾದಿಸಿ ಉದ್ಘಾಟನಾ ಸಮಾರಂಭದಿಂದ ಹೊರಗುಳಿಯುವುದಾಗಿ ಹೇಳಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read