alex Certify BIG NEWS: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ್ರಾ ಬಿ.ಕೆ. ಹರಿಪ್ರಸಾದ್? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ್ರಾ ಬಿ.ಕೆ. ಹರಿಪ್ರಸಾದ್?

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೆಲ ಸಚಿವಾಕಾಂಕ್ಷಿಗಳಿಗೆ ಮಂತ್ರಿ ಸ್ಥಾನ ಕೈತಪ್ಪಿದ್ದು, ಅಸಮಾಧಾನ ಭುಗಿಲೆದ್ದಿದೆ. ಪ್ರಮುಖವಾಗಿ ಪರಿಷತ್ ವಿಪಕ್ಷ ನಾಯಕರಾಗಿದ್ದ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ವರಿಷ್ಠರ ವಿರುದ್ಧ ತೀವ್ರವಾಗಿ ಮುನಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವ ಸ್ಥಾನ ಕೈತಪ್ಪಿದ ಹಲವು ಹಿರಿಯ ಶಾಸಕರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಇಂದು ಬೆಳಿಗ್ಗೆ 11:45ಕ್ಕೆ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣವಚನಕ್ಕೆ ರಾಜಭವನದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...