![](https://kannadadunia.com/wp-content/uploads/2023/05/ramalinga-reddy-DH-1571685405.jpg)
ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರಿಗೆ ಖಾತೆ ನೀಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಖಾತೆ ನೀಡುವ ಬಗ್ಗೆ ಯಾವುದೇ ಚರ್ಚೆಯನ್ನೇ ನಡೆಸಿಲ್ಲ. ಸಾರಿಗೆ ಇಲಾಖೆ ನೀಡುವುದಾದರೆ ನನಗೆ ಸಚಿವ ಸ್ಥಾನವೇ ಬೇಡ ಎಂದು ತಮ್ಮ ಆಪ್ತರ ಬಳಿಯ ಸಮಾಧಾನ ಹೊರ ಹಾಕಿದ್ದಾರೆ. ಕಂದಾಯ ಅಥವಾ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ.