alex Certify BIG NEWS: ʼಗ್ಯಾರಂಟಿʼ ಜಾರಿಗೆ ಸರ್ಕಾರದ ಸಿದ್ದತೆ; ಅಧಿಕಾರಿಗಳೊಂದಿಗೆ ಸಿಎಂ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ʼಗ್ಯಾರಂಟಿʼ ಜಾರಿಗೆ ಸರ್ಕಾರದ ಸಿದ್ದತೆ; ಅಧಿಕಾರಿಗಳೊಂದಿಗೆ ಸಿಎಂ ಸಭೆ

ಕಾಂಗ್ರೆಸ್ ಗ್ಯಾರಂಟಿ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಮಾಡಿ ಚರ್ಚಿಸಿದ್ದಾರೆ.

ಬೆಂಗಳೂರಿನ ಶಕ್ತಿಭವನದಲ್ಲಿ ಜರುಗಿದ ಸಭೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಸಾರಿಗೆ ಇಲಾಖೆಯೊಂದಿಗೆ, ಮನೆಯೊಡತಿಗೆ 2 ಸಾವಿರ ರೂಪಾಯಿ ಧನಸಹಾಯ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಉಚಿತ ಅಕ್ಕಿ ಗ್ಯಾರಂಟಿ ಜಾರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ನೀಡುವ ಯುವನಿಧಿ ಗ್ಯಾರಂಟಿ ಜಾರಿಗೆ ಕೌಶಲ್ಯಾಭಿವೃದ್ಧಿ ಇಲಾಖೆ, ಗೃಹಜ್ಯೋತಿ ಗ್ಯಾರಂಟಿಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡುವ ಸಲುವಾಗಿ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ಮಾಡಿ ಚರ್ಚಿಸಿದ್ದಾರೆ.

ಮುಂದಿನ ಸಂಪುಟ ಸಭೆಯಲ್ಲಿ ಗ್ಯಾರಂಟಿ ಜಾರಿ ಬಗ್ಗೆ ಸ್ಪಷ್ಟ ನಿರ್ಧಾರ ಹಾಗು ಷರತ್ತುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಜೂನ್ 1 ರಂದು ಮುಂದಿನ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು ಜೂನ್ 1 ರಿಂದ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು, ಈ ಸಭೆ ಮಹತ್ವ ಪಡೆದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...