BIG NEWS: ಪಶುಸಂಗೋಪನಾ ಸಚಿವರ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಆಕ್ರೋಶ

ಬೆಂಗಳೂರು:ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಹಸುಗಳನ್ನು ಏಕೆ ಕಡಿಯಬಾರದು ಎಂಬ ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆ ಮುಖಂಡರು ಕಿಡಿಕಾರಿದ್ದಾರೆ. ಸಚಿವರ ಹೇಳಿಕೆ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲೀಂ ಓಲೈಕೆಗಾಗಿ ಈಗ ಸಚಿವರು ಇಂತಹ ಹೆಳಿಕೆ ಕೊಡುತ್ತಿದ್ದಾರೆ. ಗೋ ಸಂರಕ್ಷಣೆ ಮಾಡಬೇಕು. ಸಾದು, ಸಂತರು ಕೂಡ ಇದನ್ನೆ ಹೇಳಿದ್ದಾರೆ. ಗೋವು ಕಡಿದರೆ ಕಾಂಗ್ರೆಸ್ ಗೆ ಗೋವಿನ ಶಾಪ ತಟ್ಟುತ್ತದೆ. ಮುಸ್ಲಿಂ ತುಷ್ಟೀಕರಣ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ.

ಗೋಹತ್ಯೆ ನಿಷೇಧ ಕಾನೂನು ಹಿಂಪಡೆದರೆ ಉಗ್ರ ಹೋರಾಟ ಮಾಡುತ್ತೇವೆ. ಗೋಹತ್ಯೆ ರಕ್ತದ ಹನಿ ಕೂಡ ಭೂಮಿ ಮೇಲೆ ಬೀಳಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read