ಒಂದೆಡೆ ಗ್ಯಾರಂಟಿ ಭರವಸೆ; ಇನ್ನೊಂದೆಡೆ ಗ್ರಾಹಕರಿಗೆ ಸರ್ಕಾರದಿಂದ ಏಟು; ಶಾಸಕ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಮೈಸೂರು: ಒಂದೆಡೆ ಗ್ಯಾರಂಟಿ ಯೋಜನೆಗಳ ಭರವಸೆ ನೀಡಿರುವ ರಾಜ್ಯ ಸರ್ಕಾರ ಮತ್ತೊಂದೆಡೆ ರಾಜ್ಯದ ಜನತೆಗೆ ಏಟು ನೀಡುತ್ತಿದೆ ಎಂದು ಶಾಸಕ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕಬಾರದು ಎಂದರು.

ಉಚಿತ ವಿದ್ಯುತ್ ಎಂದು ಈಗಾಗಲೇ ವಿದ್ಯುತ್ ದರ ಏರಿಸಿದ್ದಾರೆ. ಗ್ಯಾರಂಟಿ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಇದರಿಂದ ಜನರಿಗೆ ಪೆಟ್ಟು ಬೀಳುತ್ತಿದೆ ಎಂದರು.

ಬಿಜೆಪಿ, ಸರ್ಕಾರದ ನಡೆಯನ್ನು ಕಾದು ನೋಡುತ್ತಿದೆ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read