alex Certify Breaking News: ಬಳ್ಳಾರಿಯ ಖಾಸಗಿ ಶಾಲೆಯಲ್ಲಿ ಆಕಸ್ಮಿಕ ಬೆಂಕಿ; 150 ಮಂದಿ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking News: ಬಳ್ಳಾರಿಯ ಖಾಸಗಿ ಶಾಲೆಯಲ್ಲಿ ಆಕಸ್ಮಿಕ ಬೆಂಕಿ; 150 ಮಂದಿ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು

ಬಳ್ಳಾರಿ : ತರಗತಿ ನಡೆಯುತ್ತಿರುವಾಗಲೇ ಶಾಲೆಯಲ್ಲಿ ಬೆಂಕಿ (fire) ಕಾಣಿಸಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದೆ.
ಸುಧೀಕ್ಷಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ 150 ಮಂದಿ ವಿದ್ಯಾರ್ಥಿಗಳು (Students) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪವರ್ ಕಟ್ ಆಗಿ ಜನರೇಟರ್ ಆನ್ ಮಾಡಿದಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಜನರೇಟರ್ ರೂಮ್ ಹಾಗೂ ಇನ್ನೊಂದು ರೂಮ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಕೂಡಲೇ ಶಾಲೆಯ ಸಿಬ್ಬಂದಿಗಳು ಎಲ್ಲಾ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಕ್ಕೆ ಕರೆದುಕೊಂಡು ಬಂದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ (Fire engine) ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸಿರಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...