Breaking : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ‘PDO’ ಲೋಕಾಯುಕ್ತ ಬಲೆಗೆ

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ (PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅಗಳಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಅಗಳಕುಪ್ಪೆ ಗ್ರಾಮ ಪಂಚಾಯತ್ ಪಿಡಿಒ ಎನ್. ನರಸಿಂಹಮೂರ್ತಿ ಎಂಬುವವರು ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 2 ಲಕ್ಷ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.

ನೆಲಮಂಗಲದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ
(DYSP) ಡಿವೈಎಸ್ಪಿ ರೇಣುಕಾಪ್ರಸಾದ್ ನೇತೃತ್ವದಲ್ಲಿ ದಾಳಿ ನಡೆದಿದೆ. ಪಿಡಿಒ ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read