ಬೆಂಗಳೂರು : ಹಸಿವಿನಿಂದ ಯಾರೂ ಮಲಗಬಾರದು ಎಂದು 10 ಕೆಜಿ ಅಕ್ಕಿ (10 kg of rice) ಕೊಡುತ್ತಿದ್ದೇವೆ, ನಾನು ನುಡಿದಂತೆ ನಡೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
‘ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ಭೀಮ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ಘೋಷಣೆ ಮಾಡಿದಂತೆ ಎಲ್ಲಾ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ (Indira Canteen) ಮತ್ತೆ ಆರಂಭವಾಗಲಿದೆ. ಹಸಿವಿನಿಂದ ಯಾರೂ ಮಲಗಬಾರದು ಎಂದು 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ.
ಕೆಲವು ಕಾನೂನು ತೆಗೆದು ಹಾಕಬೇಕು ಎಂದು ಮೊದಲು ಹೇಳಿದ್ದೆವು, ಅದನ್ನು ಕೂಡ ಮಾಡಲಿದ್ದೇವೆ ಎಂದರು. ನಾವು ನುಡಿದಂತೆ ನಡೆಯುತ್ತೇವೆ, ಜನರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸುತ್ತೇವೆ. ಅದುವೇ ನಮ್ಮ ಗುರಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.