BREAKING: ಲಾರಿ-ಕಾರು ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಬೈಪಾಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತನೂ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲಿಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇಬ್ಬರು ಮೃತರ ಗುರುತು ಪತ್ತೆಯಾಗಿದ್ದು, 35 ವರ್ಷದ ಬಿಂದು ಗೌಡ ಹಾಗೂ 36 ವರ್ಷದ ಬಾಪು ಗೌಡ ಎಂದು ತಿಳಿದು ಬಂದಿದೆ. ಇನ್ನೋರ್ವ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತರು ಹಾಸನ ಹಾಗೂ ಮೈಸೂರು ಮೂಲದವರು ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read