alex Certify BIG NEWS: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನನ್ನ ಜೀವಮಾನದಲ್ಲಿ ನಾನು ಹೊಂದಾಣಿಕೆ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಖಾರವಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಹೊಂದಾಣಿಕೆ ರಾಜಕಾರಣ ಎಂದು ಹೇಳಿದ ಯಾರೇ ಇರಲಿ, ಅವರೆಲ್ಲರಿಗೂ ಒಂದು ಮಾತು ಸ್ಪಷ್ಟ ಪಡಿಸುತ್ತೇನೆ. ನಾನು ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿದವನೂ ಅಲ್ಲ, ಮಾಡುವುದೂ ಇಲ್ಲ. ಈಗಾಗಲೇ ಮಾತನಾಡಿದವರಿಗೂ ಕೂಡ ಎಲ್ಲಾ ಪಕ್ಷದವರ ಜೊತೆಯೂ ಸ್ನೇಹಿತರಿದ್ದಾರೆ. ಇದನ್ನೇ ದೊಡ್ಡ ವಿಷಯ ಮಾಡುವ ಅಗತ್ಯವಿಲ್ಲ ಎಂದರು.

ನನಗೆ ಹೊಂದಾಣಿಕೆ ರಾಜಕೀಯ ಅವಶ್ಯಕತೆ ಇಲ್ಲ. ಸಿದ್ದರಾಮಯ್ಯ ವಿರುದ್ಧ 5 ಹೊಸ ಕೇಸ್ ಗಳನ್ನು ದಾಖಲಿಸಿದ್ದೇವೆ. 65 ಎಸಿಬಿ ಕೇಸ್ ಗಳನ್ನು ಲೋಕಾಯುಕ್ತಕ್ಕೆ ನೀಡಿದ್ದೇವೆ. ಪ್ರತಾಪ್ ಸಿಂಹ ಅವರುಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...