alex Certify ಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಮೀನುಗಾರರಿಗೆ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ಮುನ್ನೆಚ್ಚರಿಕೆ : ಮೀನುಗಾರರಿಗೆ ಮಹತ್ವದ ಸೂಚನೆ

ದುರ್ಬಲಗೊಂಡಿದ್ದ ಕರಾವಳಿ ಪ್ರದೇಶದಲ್ಲಿ ಭಾರಿ ‘ಮಳೆ’ ( Heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ.

ಇಂದಿನಿಂದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಬರಲಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಗಾಳಿಯ ವೇಗವು 30 ರಿಂದ 40 ಕಿಮೀ ವೇಗದಲ್ಲಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರಿಗೂ ಸಮುದ್ರ ತೀರದಲ್ಲಿ ಓಡಾಡುವುದು, ಆಟವಾಡುವುದನ್ನು ನಿರ್ಬಂಧಿಸಲಾಗಿದೆ. ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...